ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕನ್ನಡ ಪರ ಸಂಘಟನೆಗಳನ್ನ ರೋಲ್ ಕಾಲ್ ಹಾಗೂ ವಿಜಯಪುರದಲ್ಲಿ ಬಂದ್ ಮಾಡಿ ನೋಡಿ ಎಂದು ಸವಾಲು ಹಾಕಿರುವ ಶಾಸಕ ಬಸನಗೌಡಪಾಟೀಲ ಯತ್ನಾಳ ವಿರುದ್ಧ, ನಗರದಲ್ಲಿಂದು ಪ್ರತಿಭಟನೆ ನಡೆಯಲಿದೆ.
ಕನ್ನಡಪರ ಸಂಘಟನೆಗಳು ಮರಾಠ ಅಭಿವೃದ್ಧಿ ನಿಗಮ ವಿರೋಧಿ ಪ್ರತಿಭಟನೆ ನಡೆಸ್ತಿದ್ದು, ಡಿಸೆಂಬರ್ 5ರ ಕರ್ನಾಟಕ ಬಂದ್ ಗೂ ಮೊದಲು ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಿಕೊಂಡು ಬರಲಾಗ್ತಿದೆ. ಇನ್ನು ಯತ್ನಾಳ ಸವಾಲು ಸ್ವೀಕರಿಸಿರುವ ಕನ್ನಡಪರ ಸಂಘಟನೆಗಳು ವಾಟಾಳ್ ನಾಗರಾಜ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಗ್ಗೆ 11.30ಕ್ಕೆ ಪ್ರತಿಭಟನೆ ನಡಸಲು ಸಜ್ಜಾಗಿದ್ದಾರೆ.