ಪ್ರಜಾಸ್ತ್ರ ಸುದ್ದಿ
ಹಾವೇರಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ಸೋಮವಾರ ಬಂದ್ ನಡೆಸಲಾಗುತ್ತಿದೆ. ಸಿದ್ದರಾಮಯ್ಯ ಅಭಿಮಾನಿಗಳು ಬಂದ್ ಗೆ ಕರೆ ನೀಡಿದ್ದಾರೆ.
ನಗರದ ಕೆಇಬಿ ಹತ್ತಿರದ ಗಣಪತಿ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ. ಹೀಗಾಗಿ ನಗರದಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಪ್ರತಿಭಟನೆ ನಂತರ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ.