ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಪ್ರಾರಂಭ

199

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಈಗಾಗ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಯುವ ಹಂತದಲ್ಲಿವೆ. ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿವೆ. ಏಪ್ರಿಲ್ 15ಕ್ಕೆ ಪರೀಕ್ಷೆ ಮುಗಿಯಲಿವೆ. ಇದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಸಕಲ ರೀತಿ ಸಿದ್ಧತೆಗಳನ್ನು ಮಾಡಿಕೊಂಡಿದೆ.

ರಾಜ್ಯದ 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ನೂತನ ವಿದ್ಯಾರ್ಥಿಗಳು 7,94,611 ಆಗಿದ್ದರೇ ಪುನರಾವರ್ತಿತ ವಿದ್ಯಾರ್ಥಿಗಳು 20,750 ಆಗಿದ್ದಾರೆ. ಖಾಸಗಿ ಅಭ್ಯರ್ಥಿಗಳು 18,272. ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು 8,862 ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ರಾಜ್ಯದ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಪರೀಕ್ಷೆಗಳು ಇಂದು ನಡೆಯಲಿದೆ. ಬೆಳಗ್ಗೆ 10.30ಕ್ಕೆ ಪರೀಕ್ಷೆ ಶುರುವಾಗಿ ಮಧ್ಯಾಹ್ನ 1.45ಕ್ಕೆ ಮುಗಿಯಲಿದೆ. ಈ ಬಾರಿಯೂ ಕರೋನಾ ಬ್ಯಾಚ್ ಎಂದು ಪರಿಗಣಿಸಿ ಶೇಕಡ 10ರಷ್ಟು ಗ್ರೇಸ್ ಮಾರ್ಕ್ಸ್ ನೀಡಲಾಗುತ್ತಿದೆ ಎಂದು ಎಸ್ಎಸ್ಎಲ್ ಸಿ ಬೋರ್ಡ್ ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!