ಸಚಿವ ಸಂಪುಟ ಸಭೆ: ಮತ್ತೆ ಲಾಕ್ ಡೌನ್ ಆಗುತ್ತಾ?

314

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಇಂದು ನಡೆಯಲಿದೆ. ಈ ವೇಳೆ ಪ್ರಮುಖವಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಬೇಕಾ ಬೇಡವಾ ಅನ್ನೋ ವಿಷಯ ಚರ್ಚೆಯಾಗಲಿದೆ. ನಾಡಿನಲ್ಲಿ ಕರೋನಾ ಸೋಂಕು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಚಿವರು ಮತ್ತೆ ಲಾಕ್ ಡೌನ್ ಮಾಡುವ ಅವಶ್ಯಕತೆಯಿಲ್ಲ ಎಂದು ಹೇಳುತ್ತಾರೆ. ವಿರೋಧ ಪಕ್ಷದವರು ಲಾಕ್ ಡೌನ್ ಮಾಡದೆ ಹೋದ್ರೆ ಮತ್ತೊಂದು ಬ್ರೆಜಿಲ್ ಆಗುತ್ತೆ ಎನ್ನುತ್ತಿದ್ದಾರೆ. ಸೋಂಕು ನಿಯಂತ್ರ ತರುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿ ಕಾರುತ್ತಿದ್ದಾರೆ. ಅಲ್ದೇ, ಬೆಂಗಳೂರಿನಲ್ಲಿ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಏರಿಕೆಯಾಗ್ತಿದ್ದು, ನಾಳೆ ಬೆಂಗಳೂರು ಶಾಸಕರ ಸಭೆಯನ್ನ ಸಿಎಂ ಕರೆದಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಕಠಿಣ ಕ್ರಮ, ಸಚಿವರ ಸಭೆ ನಡುವೆಯೂ ಇಂದಿನ ಸಚಿವ ಸಂಪುಟದಲ್ಲಿ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳುತ್ತೆ ಅನ್ನೋ ಕುತೂಹಲವಿದೆ. ಈಗಿರುವ ಸ್ಥಿತಿಯನ್ನೇ ಮುಂದುವರೆಸುತ್ತಾ? ಲಾಕ್ ಡೌನ್ ಘೋಷಣೆ ಮಾಡುತ್ತಾ ಅನ್ನೋದರ ಸ್ಪಷ್ಟ ಚಿತ್ರಣ ಸಚಿವ ಸಂಪುಟದ ಬಳಿಕ ಸಿಗಲಿದೆ.




Leave a Reply

Your email address will not be published. Required fields are marked *

error: Content is protected !!