ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

155

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ತಾಲೂಕು, ಜಿಲ್ಲೆ ಸೇರಿದಂತೆ ಎಲ್ಲೆಡೆ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಈಗಾಗ್ಲೇ ತಿಳಿಸಲಾಗಿದೆ.

ಕಿಸಾನ್ ಸಮ್ಮಾನ್, ರೈತ ವಿದ್ಯಾ ನಿಧಿ, ಭೂ ಸಿರಿ ಯೋಜನೆ, ಶ್ರಮಶಕ್ತಿ ಯೋಜನೆ, ರೈತ ಸಂಪದ ಯೋಜನೆ, ಎಪಿಎಂಸಿ ಕಾಯ್ದೆ ರದ್ದುಪಡಿಸಿದ್ದು, ಕೃಷಿ ಭೂಮಿ ಮಾರಾಟ ಕಾಯ್ದೆ ಕೈಬಿಟ್ಟಿದ್ದು ಸೇರಿದಂತೆ ವಿವಿಧ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ರದ್ದುಪಡಿಸಿದೆ. ಇದನ್ನು ಖಂಡಿಸಿ ತಾಲೂಕು ಮಟ್ಟದಲ್ಲಿ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ.




Leave a Reply

Your email address will not be published. Required fields are marked *

error: Content is protected !!