ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ಸರ್ಕಾರದ ವರದಿ ಹೇಳುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ರೆಡ್ ಝೋನ್ ಗೆ ಬಂದಿದೆ ಎಂದು ಸಚಿವರು ಹೇಳುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಬಗ್ಗೆ ಮುಖ್ಯಮಂತ್ರಿಗಳು ಸುಳಿವು ಕೊಟ್ಟಿದ್ದಾರೆ.
ಇಂದು ಮುಖ್ಯಮಂತ್ರಿ ಬೊಮ್ಮಾಯಿ ತಜ್ಞರ ಜೊತೆಗೆ ಸಭೆ ನಡೆಸಲಿದ್ದಾರೆ. ಅವರು ನೀಡುವ ಸಲಹೆಯ ಮೇಲೆ ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಈಗಾಗ್ಲೇ ನೈಟ್ ಕರ್ಫ್ಯೂ ಜನವರಿ 7ರ ತನಕ ಇದೆ. ಅದು ವಿಸ್ತರಣೆಯಾಗುತ್ತಾ? ನೆರೆ ರಾಜ್ಯಗಳ ಸಂಚಾರ ಬಂದ್ ಆಗುತ್ತಾ? ಆರಂಭಿಕ ಹಂತದಲ್ಲಿ ಹಲವು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗುತ್ತಾ ಅಥವ ಲಾಕ್ ಡೌನ್ ಮಾಡಲಾಗುತ್ತಾ ಅನ್ನೋ ಹಲವು ಪ್ರಶ್ನೆಗಳಿವೆ. ಇದಕ್ಕೆ ಇಂದು ಉತ್ತರ ಸಿಗಬಹುದು.