ನಾಳೆ ಸಿಂದಗಿಯಲ್ಲಿ ಬಸ್ ಕೊರತೆ

267

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಮಾರ್ಚ್ 18 ಶನಿವಾರ ವಿಜಯಪುರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿಂದಗಿ ಬಸ್ ಘಟಕದಿಂದ 40 ಬಸ್ ಗಳನ್ನು ಕಳುಹಿಸಿಕೊಡಲಾಗುತ್ತಿದೆ. ಇದರಿಂದಾಗಿ ಬಸ್ ಕೊರತೆ ಉಂಟಾಗಲಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದ ಸಿಂದಗಿ ಘಟಕದಿಂದ ಬಸ್ ಗಳನ್ನು ಕಾರ್ಯಕ್ರಮಕ್ಕೆ ಕಲ್ಪಿಸಲಾಗುತ್ತಿದೆ. ಇದರಿಂದಾಗಿ ನಾಳೆ ಬಸ್ ಸಂಚಾರದಲ್ಲಿ ಕೊರತೆ ಕಾಣಿಸಿಕೊಳ್ಳಲಿದೆ. ಆದ್ದರಿಂದ ಪ್ರಯಾಣಿಕರು ಸಹಕರಿಸಬೇಕೆಂದು ಬಸ್ ಡಿಪೋ ವ್ಯವಸ್ಥಾಪಕರು ಮನವಿ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!