ನಾಳೆ ಸಂಜೆ ಮಹತ್ವದ ಸಚಿವ ಸಂಪುಟ ಸಭೆ

127

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಫೆಬ್ರವರಿ 17ರಂದು 3 ಲಕ್ಷ ಕೋಟಿಗೂ ಅಧಿಕ ಮೊತ್ತದ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರು, ನಾಳೆ ಸಂಜೆ ಮಹತ್ವದ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಬಜೆಟ್ ವೇಳೆ ಹಲವು ಹೊಸ ಘೋಷಣೆಗಳನ್ನು ಮಾಡಿದ್ದು, ಸಚಿವ ಸಂಪುಟ ಸಭೆ ಕುತೂಹಲ ಮೂಡಿಸಿದೆ.

ಕೃಷಿ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಚಾರ ಸೇರಿ ಹಲವು ಕ್ಷೇತ್ರಗಳ ಬಗ್ಗೆ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಅವುಗಳನ್ನು ಪೂರೈಸಬೇಕು. ಇಲ್ಲದೆ ಹೋದರೆ ಎಲ್ಲ ಕೆಲಸಗಳು ಹಾಗೇ ಉಳಿದು ಬಿಡುತ್ತವೆ. ಇದರಿಂದಾಗಿ ಜನರ ಮುಂದೆ ಹೋಗಿ ಸರ್ಕಾರದ ಸಾಧನೆ ಬಗ್ಗೆ ಪ್ರಸ್ತಾಪಿಸುವುದು ಕಷ್ಟವಾಗಬಹುದು. ಆದ್ದರಿಂದ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಏನೆಲ್ಲ ಚರ್ಚೆಯಾಗುತ್ತೆ ಅನ್ನೋ ಕುತೂಹಲವಿದೆ.




Leave a Reply

Your email address will not be published. Required fields are marked *

error: Content is protected !!