ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಈ ವೇಳೆ ರಾಜ್ಯಕ್ಕೆ ಮತ್ತೊಮ್ಮೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡ್ತಾರೆ ಅಂತಾ ಹೇಳಲಾಗ್ತಿದೆ.
ಈಗಾಗ್ಲೇ 1,610 ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ನಾಳೆ ನಡೆಯುವ ಸಚಿವ ಸಂಪುಟದಲ್ಲಿ ಚರ್ಚಿಸಿದ ಬಳಿಕ, ರಾಜ್ಯದ ಜನತೆಗೆ ಮತ್ತೊಮ್ಮೆ ಸಿಹಿ ಸುದ್ದಿ ಏನಾದ್ರೂ ಕೊಡ್ತಾರಾ ಅನ್ನೋ ಕುತೂಹಲ ಮೂಡಿದೆ. ಕೇಂದ್ರಿಂದ ರಾಜ್ಯಕ್ಕೆ ಯಾವುದೇ ರೀತಿ ಆರ್ಥಿಕ ನೆರವು ಸಿಗ್ತಿಲ್ಲ. ರಾಜ್ಯ ಸರ್ಕಾರವೇ ಎಲ್ಲವನ್ನೂ ನಿಭಾಯಿಸಬೇಕಿದೆ. ಹೀಗಾಗಿ ನಾಳಿನ ಸಚಿವ ಸಂಪುಟದಲ್ಲಿ ಏನು ತೀರ್ಮಾನ ತೆಗೆದುಕೊಳ್ಳಲಾಗುತ್ತೆ ಅನ್ನೋ ಕುತೂಹಲವಿದೆ.