ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾಯಿತಿ ನೀಡಬೇಕು ಅನ್ನೋ ಡಾ.ಸರೋಜಿನಿ ಮಹಿಷಿ ವರದಿಯನ್ನ ಜಾರಿಗೆ ತರಬೇಕು ಎಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ರಾಜ್ಯದಲ್ಲಿ ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೌಕರಿ ನೀಡ್ತಿಲ್ಲ. ಇದನ್ನ ಖಂಡಿಸಿ ಅಖಂಡ ಕರ್ನಾಟಕ ಬಂದ್ ಆಚರಿಸಲಾಗ್ತಿದೆ.
ಬಂದ್ ಹಿನ್ನೆಲೆಯಲ್ಲಿ ಬಹುತೇಕ ಸಾರ್ವಜನಿಕ ಸೇವೆ ಸ್ತಬ್ಧವಾಗುವ ಸಾಧ್ಯತೆಯಿದೆ. ಆದ್ರೆ, ಶಾಲಾ ಕಾಲೇಜುಗಳಿಗೆ ರಜೆ ಇಲ್ಲವೆಂದು ಶಿಕ್ಷಣ ಸಚಿವ ಸುರೇಶಕುಮಾರ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶಾಲಾ ಕಾಲೇಜುಗಳಿಗೆ ರಜೆ ಇಲ್ಲವೆಂದು ಹೇಳಿದ್ದಾರೆ. ಆದ್ರೆ, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಜಿಲ್ಲೆಯಲ್ಲಿನ ಪರಿಸ್ಥಿತಿ ನೋಡಿಕೊಂಡು ರಜೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ತಿಳಿಸಿದ್ದಾರೆ.