ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಕರ್ನಾಟಕ ಸಚಿವಾಲಯ ನೌಕರರ ಸಂಘ ಶುಕ್ರವಾರ ಬಂದ್ ಗೆ ಕರೆ ನೀಡಿದೆ. ಸಂಘ ನೀಡಿದ ಕರೆಯಂತೆ ಎಲ್ಲ ಸಿಬ್ಬಂದಿ ಬಂದ್ ಯಶಸ್ವಿಗೊಳಿಸಬೇಕು ಎಂದು ಸಂಘದ ಅಧ್ಯಕ್ಷ ಪಿ.ಗುರುಸ್ವಾಮಿ ಮನವಿ ಮಾಡಿದ್ದಾರೆ.
ಇನ್ನು ಈ ಬಂದ್ ಕಾನೂನು ಬಾಹಿರ ಎಂದು ರಾಜ್ಯ ಸರ್ಕಾರ ಹೇಳಿದೆ. ಒಂದು ಮೇಲಾಧಿಕಾರಿಗಳ ಅನುಮತಿಯಿಲ್ಲದೆ ಕರ್ತವ್ಯಕ್ಕೆ ಹಾಜರಾಗದೆ ಹೋದರೆ, ಅದನ್ನು ಲೆಕ್ಕಕ್ಕಿಲ್ಲದ ಅವಧಿ ಎಂದು ಪರಿಗಣಿಸಲಾಗುವುದು. ಕೆಲಸಕ್ಕೆ ಬರುವವರಿಗೆ ಅಡ್ಡಿಪಡಿಸಿದರೆ ಕ್ರಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.