ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸೋಮವಾರ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಎನ್ ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಕಣದಲ್ಲಿದ್ದಾರೆ. ಹೀಗಾಗಿ ರಾಜ್ಯ ಬಿಜೆಪಿ ಶಾಸಕರು ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಸಿಎಂ ಬೊಮ್ಮಾಯಿ ಜೊತೆಗೆ ಬಿಜೆಪಿ ಶಾಸಕರು ಹೋಟೆಲ್ ನಲ್ಲೇ ಉಳಿದುಕೊಂಡಿದ್ದಾರೆ. ನಾಳೆ ಹೋಟೆಲ್ ನಿಂದ ನೇರವಾಗಿ ವಿಧಾನಸೌಧಕ್ಕೆ ಮತದಾನ ಮಾಡಲು ಬರಲಿದ್ದಾರೆ. ಹೀಗಾಗಿ ಶಾಸಕರು ಎಲ್ಲೂ ಹೋಗದಂತಾಗಿದೆ.
ಇನ್ನು ವಿಧಾನಸೌಧದ ಮೊದಲ ಮಹಡಿಯ ರೂಮ್ ನಂಬರ್ 106ರಲ್ಲಿ ರಾಷ್ಟ್ರೀಯ ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ ಮಾಡಿದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಎನ್ ಡಿಎ ಅಭ್ಯರ್ಥಿ ಮುರ್ಮು ಗೆಲುವು ಬಹುತೇಕ ಖಚಿತವೆನ್ನಬಹುದು.