ನಾಳೆಯಿಂದ 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

410

ಬೆಂಗಳೂರು: ನಾಳೆಯಿಂದ ನಾಡಿನ ಆರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ನಿರ್ದೇಶಕರು, ಹಾಸನ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ದಾವಣಗೆರೆ ಹಾಗೂ ಕೊಡಗು ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಅಂತಾ ತಿಳಿಸಿದ್ದಾರೆ.

ಈ ಮಳೆ ಎರಡ್ಮೂರು ದಿನ ಆಗುವ ಸಾಧ್ಯತೆಯಿದೆ ಅಂತಾ ಹೇಳಲಾಗ್ತಿದೆ. ಇದರ ಜೊತೆಗೆ ನಾಡಿನ ಕೆಲವು ಭಾಗಗಳಲ್ಲಿ ಇಂದು ಸಂಜೆಯಿಂದಲೇ ಮಳೆಯಾಗಲಿದೆ ಅಂತಾ ಹೇಳಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!