ಪ್ರಜಾಸ್ತ್ರ ಸುದ್ದಿ
ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ ದಿಶಾ ರವಿ, ಟೂಲ್ ಕಿಟ್ ಸಿದ್ಧಪಡಿಸಿದ್ದಾರೆ ಅನ್ನೋ ಸಂಬಂಧ ಬಂಧಿಸಲಾಗಿತ್ತು. ದೆಹಲಿ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ.
ದೆಹಲಿ ಪೊಲೀಸರು ಫೆಬ್ರವರಿ 13ರಂದು ಬೆಂಗಳೂರಿನಲ್ಲಿ ಬಂಧಿಸಿದ್ರು. ಈಗ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂಪಾಯಿ ಬಾಂಡ್ ಹಾಗೂ ಇಬ್ಬರನ್ನ ಶ್ಯೂರಿಟಿಗೆ ಸೂಚಿಸಿದೆ.