ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಟೋಯಿಂಗ್ ಸಮಸ್ಯೆ ಹೆಚ್ಚಾಗುತ್ತಿದೆ. ನೋ ಪಾರ್ಕಿಂಗ್ ಜಾಗದಲ್ಲಿ ಬೈಕ್ ಕಾರ್ ನಿಲ್ಲಿಸಿರುವುದು, ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುವುದು ಸೇರಿದಂತೆ ಟ್ರಾಫಿಕ್ಸ್ ನಿಯಮಗಳನ್ನು ಬ್ರೇಕ್ ಮಾಡಿದರೆ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತಿದೆ. ಹೀಗಾಗಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ಗಲಾಟೆಗಳಾಗಿವೆ. ಹಲ್ಲೆಗಳು ನಡೆದಿವೆ.
ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದಿರುವ ಸಿಎಂ ಬೊಮ್ಮಾಯಿ, ಇದೀಗ ಸಭೆಗೆ ಮುಂದಾಗಿದ್ದಾರೆ. ಎಸ್ಐಯೊಬ್ಬರು ವಿಕಲಚೇತನ ಮಹಿಳೆ ಮೇಲೆ ನಡೆಸಿರುವ ಹಲ್ಲೆ ವಿಡಿಯೋ ವೈರಲ್ ಆದ ನಂತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಸಿಎಂ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.
1,150, 500, 650, 1500 ರೂಪಾಯಿ ಸೇರಿದಂತೆ ವಿವಿಧ ವಾಹನಗಳಿಗೆ ವಿವಿಧ ರೀತಿಯ ಟೋಯಿಂದ ದಂಡ ವಸೂಲಿ ಮಾಡಲಾಗುತ್ತಿದೆ. ಜೊತೆಗೆ ಸಾರ್ವಜನಿಕರೊಂದಿಗೆ ಪೊಲೀಸರು ಕೆಟ್ಟದಾಗಿ ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ಇದಕ್ಕೆ ಏನು ತೀರ್ಮಾನ ತೆಗೆದುಕೊಳ್ಳಲಾಗುತ್ತೆ ನೋಡಬೇಕಿದೆ.