ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಸವದತ್ತಿ ಯಲ್ಲಮ್ಮನ ಜಾತ್ರೆ ಮುಗಿಸಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಮುಧೋಳ ತಾಲೂಕಿನ ಕುಳಲಿ ಗ್ರಾಮದ ಹತ್ತಿರ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ಟ್ರ್ಯಾಕ್ಟರ್ ಗಳ ನಡುವೆ ಪೈಪೋಟಿ ನಡೆದು ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಓವರ್ ಟೇಕ್ ಮಾಡಲು ಹೋದಾಗ ಹಿಂಬದಿಯಿಂದ ಡಿಕ್ಕಿ ಹೊಡೆದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮೂವರು ಮೃತಪಟ್ಟರಿಗೆ 10ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.