ಹಾಲ್ ಟಿಕೆಟ್ ತರಲು ಹೊರಟಿದ್ದ 10ನೇ ತರಗತಿ ವಿದ್ಯಾರ್ಥಿ ಸಾವು

301

ಪ್ರಜಾಸ್ತ್ರ ಸುದ್ದಿ

ಯಾದಗಿರಿ: ಪರೀಕ್ಷೆಯ ಹಾಲ್ ಟಿಕೆಟ್ ತರಲು ಶಾಲೆಗೆ ಹೊರಟಿದ್ದ 10ನೇ ತರಗತಿ ವಿದ್ಯಾರ್ಥಿ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಸುರಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಅದರಲ್ಲಿ ಪ್ರಯಾಣಿಸ್ತಿದ್ದ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಮಂಜುನಾಥ ಕನಕಪ್ಪಹಳ್ಳಿ(16) ಮೃತ ವಿದ್ಯಾರ್ಥಿ. ಬಸ್ ಇಲ್ಲದ ಕಾರಣ, ಟ್ರ್ಯಾಕ್ಟರ್ ನಲ್ಲಿ ಬಾಚಿಮಟ್ಟಿ ಗ್ರಾಮದಲ್ಲಿನ ಪ್ರೌಢಶಾಲೆಗೆ ಹೊರಟಿದ್ದ. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ವೇಳೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಚಾಲಕನಿಗೆ ಗಾಯಗಳಾಗಿವೆ. ಮೃತ ವಿದ್ಯಾರ್ಥಿಯ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.




Leave a Reply

Your email address will not be published. Required fields are marked *

error: Content is protected !!