ಪ್ರಜಾಸ್ತ್ರ ಸುದ್ದಿ
ಮಂಗಳೂರು: ನಗರದ ಜಪ್ಪು ಮಹಾಕಾಳಿಪಡ್ಪು ಬಳಿ ಶನಿವಾರ ಬೆಳಗ್ಗೆ ರೈಲು ಹಳಿ ದಾಟುವಾಗಿ ರೈಲು ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ವಸಂತಿ ಹಾಗೂ ಪ್ರೇಮಾ ಎಂಬುವರು ಮೃತಪಟ್ಟಿದ್ದಾರೆ.
ಬೀಡಿ ಕಾರ್ಮಿಕರಾಗಿದ್ದ ಇವರು ನಿತ್ಯ, ರೈಲು ಹಳಿ ದಾಟಿ ಬೀಡಿ ತೆಗೆದುಕೊಂಡು ಹೋಗುತ್ತಿದ್ದರು. ಇಂದು ಬೆಳಗ್ಗೆ ಎಂದಿನಂತೆ ಹಳಿ ದಾಟುವಾಗ ಕೇರಳ ಕಡೆಯಿಂದ ಬಂದ ರೈಲಿನಡಿಗೆ ಸಿಲುಕಿ ಮೃತಪಟ್ಟಿದ್ದಾರೆ. ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿಕೊಟ್ಟಿದ್ದಾರೆ.