ದೇಶದಲ್ಲಿ ಮತ್ತೊಂದು ರೈಲು ಅಪಘಾತ

120

ಪ್ರಜಾಸ್ತ್ರ ಸುದ್ದಿ

ವಿಶಾಖಪಟ್ಟಣಂ: ದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದ್ದು, 13 ಜನರು ಪ್ರಾಣ ಕಳೆದುಕೊಂಡಿದ್ದಾರೆ. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಡೆದಿದೆ.

ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ಟ್ರೇನ್ ಸಿಗ್ನಿಲ್ ಗಾಗಿ ಕಾಯುತ್ತಿದ್ದಾಗ ಹಿಂದಿನಿಂದ ಬಂದ ವಿಶಾಖಪಟ್ಟಣಂ-ರಾಯಗಡ ಟ್ರೇನ್ ಬಂದು ಡಿಕ್ಕಿ ಹೊಡೆದಿದೆ. ಹೀಗಾಗಿ 3 ಬೋಗಿಗಳು ಹಳಿ ತಪ್ಪಿ ಈ ದುರ್ಘಟನೆ ನಡೆದಿದೆ. ಮಾನವನ ದೋಷದಿಂದ ಅಪಘಾತ ನಡೆದಿರಬಹುದು ಎಂದು ಹೇಳಲಾಗುತ್ತಿದೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಆಂಧ್ರ ಸರ್ಕಾರದಿಂದ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿಯನ್ನು ಸಿಎಂ ವೈ.ಎಸ್ ಜಗನ್ ಘೋಷಿಸಿದ್ದಾರೆ. ಇನ್ನು ಪ್ರಧಾನಮಂತ್ರಿ ಕಾರ್ಯಾಲಯದಿಂದ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಘೋಷಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!