ಪ್ರಜಾಸ್ತ್ರ ಸುದ್ದಿ
ವಿಜಯಪುರ: ನೂತನ ಕಾಂಗ್ರೆಸ್ ಸರ್ಕಾರ ಐಎಎಸ್, ಐಪಿಎಸ್ ಹಂತದ ಅಧಿಕಾರಿಗಳ ವರ್ಗಾವಣೆ ಬಳಿಕ ಇದೀಗ ಕೆಎಎಸ್ ಗ್ರೇಡ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ನಡೆಸಿದೆ. ಶುಕ್ರವಾರ ತಹಶೀಲ್ದಾರ್ ಗ್ರೇಡ್-1 ಹಾಗೂ ಗ್ರೇಡ್ 2 ಹಂತದ 46 ಅಧಿಕಾರಿಗಳು ವರ್ಗಾವಣೆ ಮಾಡಿ ಆದೇಶಿಸಿದೆ.
ವಿಜಯಪುರ ಜಿಲ್ಲೆಯಲ್ಲಿ ನಾಲ್ಕು ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಸಿಂದಗಿ ತಾಲೂಕಿನ ತಹಶೀಲ್ದಾರ್ ನಿಂಗಪ್ಪ ಬಿರಾದಾರ ಅವರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿಗೆ ವರ್ಗಾವಣೆ ಮಾಡಲಾಗಿದೆ. ಸಿಂದಗಿಯ ಗ್ರೇಡ್-2 ತಹಶೀಲ್ದಾರ್ ಪ್ರಕಾಶ್ ಬಸವಂತಪ್ಪ ಸಿಂದಗಿ ಇವರನ್ನು ದೇವರ ಹಿಪ್ಪರಗಿಯ ಗ್ರೇಡ್-1 ತಹಶ್ಲೀದಾರ್ ಕವಿತಾ.ಆರ್ ಅವರ ಜಾಗಕ್ಕೆ ನಿಯೋಜಿಸಲಾಗಿದೆ.
ವಿಜಯಪುರ ಉಪ ವಿಭಾಗದ ಗ್ರೇಡ್-2 ತಹಶೀಲ್ದಾರ್ ಸಿ.ಎ ಗುಡದಿನ್ನಿ ಅವರನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿಗೆ ವರ್ಗಾವಣೆ ಮಾಡಲಾಗಿದೆ. ಬೀದರ ಜಿಲ್ಲೆಯ ಆಳಂದ ತಾಲೂಕಿನ ತಹಶೀಲ್ದಾರ್ ಪ್ರದೀಪ್ ಕುಮಾರ್ ಹಿರೇಮಠ ಅವರನ್ನು ಸಿಂದಗಿ ತಹಶೀಲ್ದಾರ್ ಆಗಿ ನಿಯೋಜನೆ ಮಾಡಲಾಗಿದೆ. ನಿಡಗುಂದಿ ತಾಲೂಕಿನ ತಹಶೀಲ್ದಾರ್ ಕಿರಣ್ ಕುಮಾರ್.ಜಿ ಅವರನ್ನು ಗದಗ ಜಿಲ್ಲೆಯ ಗಜೇಂದ್ರಗಡಕ್ಕೆ ವರ್ಗಾವಣೆ ಮಾಡಲಾಗಿದೆ.
ಹೀಗೆ ಬೀದರ, ಹಾಸನ, ಬಳ್ಳಾರಿ, ಧಾರವಾಡ, ಕಲಬುರಗಿ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ವಿಜಯಪುರ, ರಾಯಚೂರ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ.