ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರ ವಿವಿಧ ಇಲಾಖೆಗಳ ಅಧಿಕಾರಿಗಳ ವರ್ಗಾವಣೆ ಕೆಲಸ ಭರ್ಜರಿಯಾಗಿ ನಡೆದಿದೆ. ಇದೀಗ 17 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ನಾಲ್ಕು, ತುಮಕೂರು, ಬದಾಮಿ, ಕೋಲಾರ, ಬೆಂಗಳೂರು, ಪಾಂಡವಪುರ, ಯಲಬುರ್ಗಾ, ಹೊಸಪೇಟೆ, ಗದಗ ಸೇರಿದಂತೆ ವಿವಿಧ ಇಲಾಖೆಯ 17 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.