ಪ್ರಜಾಸ್ತ್ರ ಸುದ್ದಿ
ಹಾಸನ: ಜಿಲ್ಲೆಯಲ್ಲಿ ಮಳೆಯ ಆವಂತರ ಸಾಕಷ್ಟು ಆಗುತ್ತಿದೆ. ಭಾರೀ ಮಳೆ, ಗಾಳಿಯಿಂದ ಮರಗಳು ಧರೆಗುರುಳುತ್ತಿವೆ. ಇದರ ಪರಿಣಾಮ ಸಾವು ನೋವು ಸಂಭವಿಸುತ್ತಿವೆ. ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಚೆನ್ನರಾಯಪಟ್ಟಣ ತಾಲೂಕಿನ ಮಾಳೆಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಲ್ಲಸೋಮನಹಳ್ಳಿಯ ರಂಗಶೆಟ್ಟಿ ಮೃತ ದುರ್ದೈವಿ. ಚೆನ್ನರಾಯಪಟ್ಟಣದಿಂದ ತನ್ನ ಗ್ರಾಮಕ್ಕೆ ಹೊರಟಿದ್ದ ವೇಳೆ ಮರ ಬಿದ್ದು ಮೃತಪಟ್ಟಿದ್ದಾನೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.