ಪ್ರಜಾಸ್ತ್ರ ಸುದ್ದಿ
ರಾಮನಗರ: ಚಲಿಸುತ್ತಿದ್ದ ಕಾರ್ ಮೇಲೆ ಮರವೊಂದು ಬಿದ್ದ ಪರಿಣಾಮ ತಂದೆ ಹಾಗೂ ಮಗ ಮೃತಪಟ್ಟ ಘಟನೆ ಕಂಭಾಪುರ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ತಾಯಿ ಹಾಗೂ ಇನ್ನಿಬ್ಬರು ಮಕ್ಕಳೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುಂದ್ರೇಶ್(40) ಹಾಗೂ ಮಗ ತನ್ಮಯ್(2) ವರ್ಷ ಎಂದು ಹೇಳಲಾಗುತ್ತಿದೆ. ಶೀಲಾ, ಗಾನವಿ, ಸಾನವಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಊರು ಜಾತ್ರೆಗೆ ಹೋಗಿದ್ದ ಸುಂದ್ರೇಶ್ ಕುಟುಂಬ, ವಾಪಸ್ ಬೆಂಗಳೂರಿಗೆ ಹೊರಟಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.