ಶಾಸಕರ ಖರೀದಿ ಪ್ರಕರಣ ಎಸ್ಐಟಿಯಿಂದ ಲುಕ್ ಔಟ್ ನೋಟಿಸ್

137

ಪ್ರಜಾಸ್ತ್ರ ಸುದ್ದಿ

ಹೈದ್ರಾಬಾದ್: ತೆಲಂಗಾಣದ ಆಡಳಿತರೂಢ ಟಿಆರ್ ಎಸ್ ಶಾಸಕರ ಅಪಹರಣ ಹಾಗೂ ಖರೀದಿ ಪ್ರಕರಣ ಸಂಬಂಧ ತುಷಾರ್ ವೆಲ್ಲಪಲ್ಲಿ ಹಾಗೂ ಜಗ್ಗು ಸ್ವಾಮಿ ಎಂಬುವರಿಗೆ ಎಸ್ಐಟಿ ಲುಕ್ ಔಟ್ ನೋಟಿಸ್ ನೀಡಿದೆ.

ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಬಿಜೆಪಿ ರಾಷ್ಟ್ರೀಯ ಪ್ರಾಧನ ಕಾರ್ಯದರ್ಶಿ ಬಿ.ಎಲ್ ಸಂತೋಷಗೆ ನೋಟಿಸ್ ನೀಡಲಾಗಿತ್ತು. ನಂತರ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ಇಬ್ಬರಿಗೆ ಲುಕ್ ಔಟ್ ನೋಟಿಸ್ ನೀಡಿದ್ದು, ದೇಶ ಬಿಟ್ಟು ತೆರಳದಂತೆ ಸೂಚನೆ ನೀಡಲಾಗಿದೆ. ಇದೀಗ ಬಿ.ಎಲ್ ಸಂತೋಷಗೂ ಬಂಧನ ಭೀತಿ ಎದುರಾಗಿದೆ.




Leave a Reply

Your email address will not be published. Required fields are marked *

error: Content is protected !!