ಪ್ರಜಾಸ್ತ್ರ ಸುದ್ದಿ
ಉತ್ತರ ಪ್ರದೇಶ: ಮರಳು ತುಂಬಿದ ಲಾರಿಯೊಂದು ಕಾರಿನ ಮೇಲೆ ಬಿದ್ದ ಪರಿಣಾಮ 8 ಜನರು ಸಾವನ್ನಪ್ಪಿರುವ ದುರಂತ ನಡೆದಿದೆ. ಉತ್ತರ ಪ್ರದೇಶದ ಕೌಸಂಭಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. 10 ಜನರಿದ್ದ ಸ್ಕಾರ್ಪಿಯೋ ವಾಹನದ ಮೇಲೆ ಲಾರಿ ಮಗುಚಿಬಿದ್ದಿದೆ.
ಈ ಘಟನೆಯಲ್ಲಿ 7 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ರೆ ಓರ್ವ ಮಹಿಳೆ ಸ್ಥಳೀಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿಕೊಂಡು ಬರ್ತಿದ್ದವರು ಮಸಣ ಸೇರಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ ಲಾರಿ ಟೈಯರ್ ಸ್ಫೋಟಗೊಂಡು ಈ ಘಟನೆ ನಡೆದಿರಬಹುದು ಎನ್ನಲಾಗ್ತಿದೆ.
ಕೌಸಂಭಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ ಸಂತಾಪ ಸೂಚಿಸಿದ್ದು, ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.