ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದ ಟೌನ್ ಹಾಲ್ ಬಳಿ ಲಾರಿಯೊಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಹಿರಿಯ ಪತ್ರಕರ್ತರೊಬ್ಬರು ನಿಧನರಾಗಿದ್ದಾರೆ. ಗಂಗಾಧರ ಮೂರ್ತಿ(49) ನಿಧನರಾದ ಹಿರಿಯ ಪತ್ರಕರ್ತರಾಗಿದ್ದಾರೆ.
ಡ್ರಮ್ ಗಳನ್ನು ತುಂಬಿಕೊಂಡು ಹೊರಟಿದ್ದ ಲಾರಿ ಟೌನ್ ಹಾಲ್ ಬಳಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪಕ್ಕದಲ್ಲಿ ಬೈಕ್ ಮೇಲೆ ಹೊರಟಿದ್ದ ಪತ್ರಕರ್ತರ ಗಂಗಾಧರ ಮೂರ್ತಿ ಮೇಲೆ ಪಲ್ಟಿಯಾಗಿದೆ. ಅವರನ್ನು ರಕ್ಷಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ನಿಧನರಾಗಿದ್ದಾರೆ.