ಪ್ರಜಾಸ್ತ್ರ ಸುದ್ದಿ
ಮಂಡ್ಯ: ಕಾರನ್ನು ಹಿಂದಿಕ್ಕುವ ಭರದಲ್ಲಿ ಮಾವಿನಕಾಯಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಹತ್ತಿರ ನಡೆದಿದೆ.
ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆ ತುಂಬಾ ಮಾವಿನಕಾಯಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಮದ್ದೂರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.