ಪ್ರಜಾಸ್ತ್ರ ಸುದ್ದಿ
ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ನದಿಗೆ ಲಾರಿಯೊಂದು ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ತಾಲೂಕಿನ ಮುನಿರಾಬಾದ್ ಹತ್ತಿರ ಮಂಗಳವಾರ ನಡೆದಿದೆ. ಜಾರ್ಕಂಡ್ ಮೂಲದ ಭರತ್ ಸಿಂಗ್(42) ಮೃತ ದುರ್ದೈವಿ.
ಕೊಪ್ಪಳದಿಂದ ಹೊಸಪೇಟೆ ಕಡೆಗೆ ಲಾರಿ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ಸಿಗದೆ ನದಿಯ ಸೇತುವೆ ಮೇಲಿಂದ ಕೆಳಗೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.