ಎರಡು ಲಾರಿಗಳ ನಡುವೆ ಅಪಘಾತ, ಓರ್ವ ಸಾವು

185

ಪ್ರಜಾಸ್ತ್ರ ಸುದ್ದಿ

ತುಮಕೂರು: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿ ಕ್ಲೀನರ್ ವೊಬ್ಬ ಮೃತಪಟ್ಟ ಘಟನೆ ಮಧುಗಿರಿ ತಾಲೂಕಿನ ಜಡೆಗೊಂಡನಹಳ್ಳಿಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಸುರೇಶ್ ಎಂಬಾತ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಘಟನೆ ಬಳಿಕ ಎರಡೂ ಲಾರಿಗಳ ಚಾಲಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!