ಪ್ರಜಾಸ್ತ್ರ ಸುದ್ದಿ
ವಿಜಯನಗರ: ಆಟೋ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋದಲ್ಲಿದ್ದ 7 ಜನರು ಮೃತಪಟ್ಟ ದಾರುಣ ಘಟನೆ ತಾಲೂಕಿನ ಕಾರಿಗನೂರು ಹತ್ತಿರ ಶುಕ್ರವಾರ ನಡೆದಿದೆ.
ಎರಡು ಆಟೋಗಳಿಗೆ ಟ್ರಕ್ ಹೊಡೆದ ಪರಿಣಾಮ 7 ಜನರು ಮೃತಪಟ್ಟಿದ್ದಾರೆ. 12 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರು ಬಳ್ಳಾರಿ ಮೂಲದವರೆಂದು ತಿಳಿದು ಬಂದಿದೆ.
ಹೊಸಪೇಟೆ ಜಿಲ್ಲಾಸ್ಪತ್ರೆಯಲ್ಲಿ ಶವಗಳನ್ನು ಇರಿಸಲಾಗಿದೆ. ಅವರ ಆಧಾರ್ ಕಾರ್ಡ್ ಆಧಾರದ ಮೇಲೆ ಗುರುತು ಪತ್ತೆ ಹಚ್ಚುವ ಕೆಲಸ ನಡೆದಿದೆ. ಗಾಯಗೊಂಡ 12 ಜನರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಅಂತಾ ಹೇಳಲಾಗುತ್ತಿದೆ.