ಪ್ರಜಾಸ್ತ್ರ ಸುದ್ದಿ
ದೇವರಹಿಪ್ಪರಗಿ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಮ್ ಶರಣಪ್ಪ ಗೊರನಾಳ (45) ಮಗ ಲಕ್ಷ್ಮಣ ರಾಮ ಗೊರನಾಳ(25) ಮೃತ ದುರ್ದೈವಿಗಳು.
ಪಟ್ಟಣದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಬೈಕ್ ಸವರರಾದ ತಂದೆ ಮಗನು ಕನ್ನೊಳ್ಳಿಯಿಂದ ದೇವರಹಿಪ್ಪರಗಿಗೆ ಹೋಗುವಾಗ ಅಪಘಾತ ನಡೆದಿದೆ. ಸಿಂದಗಿ ತಾಲೂಕು ಆಸ್ಪತ್ರೆಗೆ ಮೃತದೇಹಗಳನ್ನು ತರಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.