ಪ್ರಜಾಸ್ತ್ರ ಅಪರಾಧ ಸುದ್ದಿ
ಬಂಟ್ವಾಳ: ತುಳು ನಟ ಸುದೀಂದ್ರ ಎಂಬುವರನ್ನ ಅವರ ಫ್ಲಾಟ್ ನಲ್ಲಿಯೇ ಕಳೆದ ರಾತ್ರಿ ಹತ್ಯೆ ಮಾಡಲಾಗಿದೆ. ಆದ್ರೆ, ಕೃತ್ಯ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ. ತಾಲೂಕಿನ ಬಿ.ಸಿ ರಸ್ತೆಯಲ್ಲಿರುವ ಅವರ ಫ್ಲಾಟ್ ನಲ್ಲಿ ಅಪರಿಚಿತರು ಕೊಲೆ ಮಾಡಿದ್ದಾರೆ.
ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿರಬಹುದು ಅನ್ನೋ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸ್ತಿದ್ದಾರೆ. 2018ರಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿ ಇತ್ತೀಚೆಗೆ ಹೊರ ಬಂದಿದ್ರು. ಇದೀಗ ಅವರ ಹತ್ಯೆಯಾಗಿದೆ.