ಪ್ರಜಾಸ್ತ್ರ ಸುದ್ದಿ
ತುಮಕೂರು: ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ರಾಶಿ ರಾಶಿ ಕಾಂಡೋಮ್ ಪ್ಯಾಕೇಟ್ ಗಳು ಬಿದ್ದಿರುವ ದೃಶ್ಯಗಳು ಎಲ್ಲೆಡೆ ವೈರಲ್ ಆಗಿತ್ತು. ಇದರ ಹಿಂದೆ ವೇಶ್ಯಾವಾಟಿಕೆ ದಂಧೆಯ ನಂಟು ಇದೆ ಎಂದು ತಿಳಿದು ಬಂದಿದೆ.
ನಗರದ ಕ್ಯಾತಸಂದ್ರದಲ್ಲಿನ ನಂದಿನ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂದು ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟಾನ್ಲಿ, ಪರಶುರಾಮ ಎಂಬುವರು ಎಸ್ಪಿಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಎಸ್ಪಿ ಲಾಡ್ಜ್ ಮೇಲೆ ದಾಳಿ ನಡೆಸಿ, ವೇಶ್ಯಾವಾಟಿಕೆ ಆರೋಪದ ಮೇಲೆ ರಾಜ್ಯ, ಹೊರ ರಾಜ್ಯದ ಮಹಿಳೆಯರು ಹಾಗೂ ಗಿರಾಕಿಗಳನ್ನು ಬಂಧಿಸಲಾಗಿದೆ.
ಈ ದಂಧೆ ನಡೆಸಲು ಸುರಂಗ ಮಾರ್ಗವನ್ನು ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಯಾರಿಗೂ ತಿಳಿಯದಂತೆ ವ್ಯವಹಾರ ನಡೆಸಲಾಗುತಿತ್ತಂತೆ.