ಪ್ರಜಾಸ್ತ್ರ ಸುದ್ದಿ
ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿ ವಾಹಿನಿಯೊಂದರ ನಿರೂಪಕನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿ ನಿರೂಪಕ ರೋಹಿತ್ ರಂಜನ್ ಬಂಧಿತ ಆರೋಪಿ.
ನೋಯ್ಡಾ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಛತ್ತೀಸಗಡ ಪೊಲೀಸರು ಗಾಜಿಯಾಬಾದ್ ನ ಇಂದಿರಾಪುರಂನಲ್ಲಿರುವ ರೋಹಿತ್ ರಂಜನನ್ನು ಬಂಧಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ನನ್ನ ಬಂಧನ ಕಾನೂನು ಬದ್ಧವಾಗಿದೆಯೇ ಎಂದು ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಸ್ಥಳೀಯ ಪೊಲೀಸರು ಪ್ರತಿಕ್ರಿಯೆ ನೀಡಿದ್ದು, ನಿಯಮಾನುಸಾರ ಸ್ಥಳೀಯ ಪೊಲೀಸರು ಸ್ಥಳದಲ್ಲಿದ್ದಾರೆ. ಕೋರ್ಟ್ ಬಂಧನ ವಾರೆಂಟ್ ತೋರಿಸಲಾಗಿದೆ. ಕೋರ್ಟ್ ನಲ್ಲಿ ನಿಮ್ಮ ಪ್ರತಿವಾದ ಮಂಡಿಸುವಾಗ ಸಹಕರಿಸಬೇಕು ಎಂದಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಯನ್ನು ತಿರುಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹಿನಿ ಇದಕ್ಕೆ ಕ್ಷಮೆಯಾಸಿತ್ತು.