ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷದಿಂದ ಪಕ್ಷಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಹಾವೇರಿ ಇಬ್ಬರು ಶಾಸಕರು ಕಾಂಗ್ರೆಸ್ಸಿಗೆ ಬರುತ್ತಿದ್ದಾರೆ ಎಂದು ಹೇಳಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನು ಬಿಜೆಪಿ ಏನಾದರೂ ಸ್ಟ್ಯಾಟರ್ಜಿ ಮಾಡಲಿ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ.
ಮೊದಲು ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎಂದರು. ಈಗ ಮೋದಿ ನೇತೃತ್ವದಲ್ಲಿ ಚುನಾವಣೆ ಎನ್ನುತ್ತಿದ್ದಾರೆ. ನಾವು ಯೋಜನೆಗಳನ್ನು ಘೋಷಣೆ ಮಾಡಿದ ಬಳಿಕ ಬಿಜೆಪಿಯವರು ಘೋಷಣೆ ಮಾಡುತ್ತಿದ್ದಾರೆ. ಬಿಜೆಪಿಯವರ ಭ್ರಷ್ಟಾಚಾರ ಅವರ ಪಕ್ಷದವರಿಂದಲೇ ಒಂದೊಂದಾಗಿ ಹೊರ ಬರುತ್ತಿವೆ ಎಂದು ಕಿಡಿ ಕಾರಿದರು.