ಪ್ರಜಾಸ್ತ್ರ ಸುದ್ದಿ
ಕೊಪ್ಪಳ: ಮಂಗಳವಾರ ರಾತ್ರಿ ನಡೆದ ಬೆಂಕಿ ಅನಾಹುತ ಪ್ರಕರಣದಲ್ಲಿ ಮಕ್ಕಳಿಬ್ಬರು ಮೃತಪಟ್ಟ ಘಟನೆ ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ. 8 ವರ್ಷದ ಜಯರಾಜ್ ಮೃತಪಟ್ಟಿದ್ದು, ಇಂದು 11 ವರ್ಷದ ವಿನೋದರಾಜ್ ಮೃತಪಟ್ಟಿದ್ದಾನೆ.
ಗಂಭೀರವಾಗಿ ಗಾಯಗೊಂಡಿದ್ದ ವಿನೋದರಾಜನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದಾನೆ ಎಂದು ಕುಕನೂರು ಪೊಲೀಸರು ತಿಳಿಸಿದ್ದಾರೆ.