ಇಬ್ಬರು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ

169

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಬ್ಬರು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲು ಮಾಡಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದೇಶಿಸಿದ್ದಾರೆ. ಜನವರಿ 24ರಂದು ಹೊರಡಿಸಿದ್ದ ಅಧಿಸೂಚನೆಯನ್ನು ತಿದ್ದುಪಡಿ ಮಾಡಲಾಗಿದೆ.

ಕೊಪ್ಪಳ ಉಸ್ತುವಾರಿ ಸಚಿವರಾಗಿದ್ದ ಆನಂದ್ ಸಿಂಗ್ ರನ್ನು ತವರು ಜಿಲ್ಲೆಯಾದ ವಿಜಯನಗರ ಉಸ್ತುವಾರಿ ನೀಡಲಾಗಿದೆ. ಸಚಿವ ಶಶಿಕಲಾ ಜೊಲ್ಲೆಗೆ ವಿಜಯನಗರಿಂದ ಕೊಪ್ಪಳ ಜಿಲ್ಲೆಗೆ ಉಸ್ತುವಾರಿ ನೀಡಲಾಗಿದೆ. ವಿಜಯನಗರಕ್ಕೆ ಆನಂದ್ ಸಿಂಗ್ ಉಸ್ತುವಾರಿ ನೀಡದೆ ಇದ್ದಾಗ ಹೊಸಪೇಟೆಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. 6 ತಿಂಗಳ ನಂತರ ಉಸ್ತುವಾರಿ ಬದಲಾಯಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!