ಭೀಕರ ಸರಣಿ ಅಪಘಾತ: ಇಬ್ಬರು ಸಾವು

483

ಪ್ರಜಾಸ್ತ್ರ ಸುದ್ದಿ

ರಾಯಚೂರು: ಲಿಂಗಸೂರು ತಾಲೂಕಿನ ಗೊಲಪಲ್ಲಿ ಎಂಬಲ್ಲಿ ಎರಡು ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ಭೀಕರ ಸರಣಿ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಭುವನ(16) ಹಾಗೂ ಹರ್ಷಿತಾ(18) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯ ಹಿಂದೆ ಬರ್ತಿದ್ದ ಕಾರಿಗೆ ಅದರ ಹಿಂದೆ ಬರ್ತಿದ್ದ ಲಾರಿ ಗುದ್ದಿದ ಪರಿಣಾಮ ಈ ಅನಾಹುತ ಸಂಭವಿಸಿದೆ.ಹೊರಟಿದ್ರು. ಇದರಲ್ಲಿ ಯಾರ ತಪ್ಪಿದೆ ಅನ್ನೋದರ ಕುರಿತು ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!