ಪ್ರಜಾಸ್ತ್ರ ಸುದ್ದಿ
ಜಮ್ಮು ಮತ್ತು ಕಾಶ್ಮೀರ: ಕಣಿವೆ ನಾಡಿನಲ್ಲಿ 24 ಗಂಟೆಯಲ್ಲಿ ಎರಡು ಬಾರಿ ಎನ್ ಕೌಂಟರ್ ನಡೆದಿದ್ದು, ಇಬ್ಬರು ಉಗ್ರರ ಹತ್ಯೆ ಮಾಡಲಾಗಿದೆ. ನಿನ್ನೆಯಷ್ಟೇ ಕುಪ್ವಾರದಲ್ಲಿ ಇಬ್ಬರು ಉಗ್ರರ ಹತ್ಯೆ ಮಾಡಲಾಗಿತ್ತು. ಇಂದು ಬಾರಾಮುಲ್ಲಾದಲ್ಲಿ ಮತ್ತೆ ಎನ್ ಕೌಂಟರ್ ನಡೆದಿದೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ವನಿಗಮ್ ಪಯೀನ್ ಕ್ರೀರಿ ಪ್ರದೇಶದಲ್ಲಿ ಭಯೋತ್ಪಾದಕರು ಅಡಿಗಿದ್ದಾರೆ ಅನ್ನೋ ಮಾಹಿತಿ ಬಂದಿತ್ತು. ಗುರುವಾರ ಬೆಳಗ್ಗೆ ಸೈನಿಕರು ಕಾರ್ಯಾಚರಣೆ ನಡೆಸುವಾಗ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಸೈನಿಕರು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಎಕೆ 47 ರೈಫಲ್, ಪಿಸ್ತೂಲ್ ಸೇರಿದಂತೆ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಅವುಗಳನ್ನು ವಶಕ್ಕೆ ಪಡೆದಿದ್ದು, ಉಗ್ರರು ಯಾವ ಸಂಘಟನೆಗೆ ಸೇರಿದವರು ಅನ್ನೋದರ ತನಿಖೆ ನಡೆಸಲಾಗುತ್ತಿದೆ.