ಪ್ರಜಾಸ್ತ್ರ ಸುದ್ದಿ
ವಿಜಯಪುರ: ನಗರದ ಹೊರವಲಯದಲ್ಲಿರುವ ಮಹಾನಗರ ಪಾಲಿಕೆಯ ಕಸ ಸಂಗ್ರಹ ಘಟಕದಲ್ಲಿ ಇಬ್ಬರು ಕಾರ್ಮಿಕರು ಮಿಷನ್ ನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಘಟನೆ ಹೇಗೆ ನಡೆಯಿತು, ಮೃತಪಟ್ಟವರು ಯಾರು ಅನ್ನೋದು ಇನ್ನು ತಿಳಿದು ಬಂದಿಲ್ಲ.
ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆದ್ರೆ, ಸಾವಿಗೆ ನಿಜವಾದ ಕಾರಣ ಏನು? ಘಟನೆ ಹೇಗೆ ನಡೆಯಿತು ಅನ್ನೋದರ ಸ್ಪಷ್ಟತೆ ಸಿಕ್ಕಿಲ್ಲ. ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.