‘ಮಹಾ’ನಾಡಿನಲ್ಲಿ ಠಾಕ್ರೆ ಕುಡಿ ದರ್ಬಾರ್

335

ಮುಂಬೈ: ಮಹಾರಾಷ್ಟ್ರದ ನೂತನ ಸಿಎಂ ಆಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶಿವಾಜಿ ಪಾರ್ಕ್ ನಲ್ಲಿ ಆಯೋಜಿಸಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ ಶಿವಾಜಿ ಹಾಗೂ ತಂದೆ ಬಾಳಾ ಸಾಹೇಬ್ ಠಾಕ್ರೆ ಹೆಸರಿನಲ್ಲಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಶಿವಸೇನೆಯ ಏಕನಾಥ ಶಿಂಧೆ, ಸುಭಾಶ ದೇಸಾಯಿ, ಎನ್ ಸಿಪಿ ಹಿರಿಯ ನಾಯಕ ಜಗ್ಗನ ಬುಜ್ ಬಲ್, ಜಯಂತ ಪಾಟೀಲ ಹಾಗೂ ಕಾಂಗ್ರೆಸ್ ನ ನಿತಿನ ರಾವತ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ರು. ಈ ಮೂಲಕ ಮಹಾಮೈತ್ರಿ ಸರ್ಕಾರ ರಚನೆಯಾಯ್ತು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಶರದ್ ಪವಾರ, ಮಾಜಿ ಸಿಎಂ ದೇವೇಂದ್ರ ಫಡ್ನವಿಸ್, ಮಧ್ಯಪ್ರದೇಶ ಸಿಎಂ ಕಮಲನಾಥ, ಕಾಂಗ್ರೆಸ್ ಮುಖಂಡರಾದ ಅಹ್ಮದ ಪೇಟಲ, ಮಲ್ಲಿಕಾರ್ಜುನ ಖರ್ಗೆ, ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ಹಾಗೂ ಠಾಕ್ರೆ ಕುಟುಂಬದ ಸದಸ್ಯ ರಾಜ ಠಾಕ್ರೆ, ಅಜಿತ ಪವಾರ, ಮುಖೇಶ ಅಂಬಾನಿ, ನೀತಾ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ರು.

ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಯುವ ನಾಯಕ ರಾಹುಲ ಗಾಂಧಿ, ಮಾಜಿ ಪ್ರಧಾನಿ ಮನಮೋಹನ ಸಿಂಗ್ ಗೈರಾಗಿದ್ರು. ಸಿಂಗ್ ಪತ್ರದ ಮೂಲಕ ಶುಭ ಕೋರಿದ್ದಾರೆ. ಪ್ರಧಾನಿ ಮೋದಿ ಉದ್ಧವ್ ಠಾಕ್ರೆ ಶುಭ ಕೋರಿದ್ದಾರೆ.




Leave a Reply

Your email address will not be published. Required fields are marked *

error: Content is protected !!