ಪ್ರಜಾಸ್ತ್ರ ಸುದ್ದಿ
ಉಡುಪಿ: ಇಲ್ಲಿನ ಕಾಲೇಜುವೊಂದರಲ್ಲಿ ನಡೆದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಇನ್ನೊಂದು ಕಡೆ ಈ ಕುರಿತು ನಿನ್ನೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಸದಸ್ಯ ಶರಣ್ ಪಂಪ್ ವೆಲ್, ಹೆಣ್ಮಕ್ಕಳು ತಲವಾರ, ಕತ್ತಿ ಹಿಡಿಯಲು ಸಿದ್ಧರಾಗಬೇಕು ಅಂತಾ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.
ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯ ನಡೆದಾಗ ತಲವಾರ, ಕತ್ತಿ ಹಿಡಿಯಲು ಸಿದ್ಧರಾಗಬೇಕು ಎಂದು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ಸ್ವಯಂಪ್ರೇರಿತವಾಗಿ ಪಂಪ್ ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ್ದಾರೆ.