ಕಲಬುರಗಿ: ರೋಷನ್ ಬೇಗ್ ಸೇರಿ 20 ಜನ ಬಿಜೆಪಿಗೆ ಬರಲಿದ್ದಾರೆ ಅಂತಾ ಉಮೇಶ್ ಜಾಧವ್ ಹೊಸ ಬಾಂಬ್ ಸಿಡಿಸಿದ್ದಾರೆ. ಕಲಬುರಗಿಯಲ್ಲಿ ಮಾತ್ನಾಡಿದ ಅವರು, 20-25 ಜನ ಕಾಂಗ್ರೆಸ್ ನಾಯಕರು ಬಿಜೆಪಿ ಸೇರಲಿದ್ದಾರೆ ಅಂತಾ ಹೇಳಿದ್ದಾರೆ. ಸ್ಥಿರ ಸರ್ಕಾರಕ್ಕಾಗಿ ಬಿಜೆಪಿಗೆ ಬರುತ್ತಿದ್ದಾರೆ ಎಂದಿದ್ದಾರೆ.
ಇನ್ನು ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸೋಲಿನ ಭೀತಿ ಇದೆ. ಹೀಗಾಗಿ ಅವರು ಇವಿಎಂ ಯಂತ್ರದ ಮೇಲೆ ಆರೋಪ ಮಾಡುತ್ತಿದ್ದಾರೆ ಅಂತಾ ಹೇಳಿದ್ದಾರೆ. ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಜಾಗ್ರತ ಕ್ರಮ ಕೈಗೊಂಡಿದ್ದು ನೋಡಿದ್ರೆ, ಕಾಂಗ್ರೆಸ್ ಸೋಲು ಪಕ್ಕ. ಇದರ ಜೊತೆಗೆ ಚಿಂಚೋಳಿ ಉಪ ಚುನಾವಣೆಯಲ್ಲಿಯೂ ನಾವೇ ಗೆಲ್ಲುತ್ತೇವೆ ಅಂತ ಹೇಳಿದ್ದಾರೆ.