ಪ್ರಜಾಸ್ತ್ರ ಸುದ್ದಿ
ಜೋಧಪುರ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾ ಗಾಂಧಿ ಅವರ ಮೊಮ್ಮಗ ರಾಹುಲ್ ಗಾಂಧಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅವರ ಅಜ್ಜಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿಯಲ್ಲಿ ಲಕ್ಷಾಂತರ ಜನರನ್ನು ಜೈಲಿಗೆ ಕಳಿಸಿದ್ದಾರೆ. ಹಲವು ರಾಜಕೀಯ ಪಕ್ಷಗಳನ್ನು ನಿಷೇಧಿಸಿದ್ದರು. ಹೀಗಾಗಿ ಅವರ ಮೊಮ್ಮಗ ರಾಹುಲ್ ಗಾಂಧಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಹಕ್ಕಿಲ್ಲ.
ಭ್ರಷ್ಟಾಚಾರದಲ್ಲಿ ಭಾಗಿಯಾದವರು ಜೈಲಿಗೆ ಹೋಗಿದ್ದಾರೆ. ಮೂರನೇ ಅವಧಿಗೆ ಮೋದಿ ಅವರನ್ನು ಪ್ರಧಾನಿ ಮಾಡಲು ಜನರು ಸಿದ್ಧರಾಗಿದ್ದಾರೆ. ಚುನಾವಣೆ ಬಳಿಕ ಅವರು ಮತ್ತೆ ಪ್ರಧಾನಿಯಾಗುತ್ತಾರೆ ಎಂದರು.