ಪ್ರಜಾಸ್ತ್ರ ಸುದ್ದಿ
ಇಂಡಿ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಭೀಮಾ ನದಿಯ ದಂಡೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ಹಾದು ಹೋಗಿರುವ ಭೀಮಾ ನದಿ ದಂಡೆಯಲ್ಲಿ ಶವ ಪತ್ತೆಯಾಗಿದ್ದು, ಸಂಪೂರ್ಣವಾಗಿ ಕೊಳೆತು ಹೋಗಿದೆ.
ಸುಮಾರು 50 ವರ್ಷದ ವ್ಯಕ್ತಿಯನ್ನ ದುಷ್ಕರ್ಮಿಗಳು ಕೊಲೆಗೈದು ಬಿಸಾಕಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತನ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.