7 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ: ಸಿಎಂ ಸಭೆ

383

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಸೋಂಕಿನಿಂದ ಕಳೆದ ಒಂದೂವರೆ ತಿಂಗಳಿನಿಂದ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಬೆಳಗ್ಗೆ ನೀಡಿರುವ ಸಮಯದ ಬಳಿಕ ಸಾರ್ವಜನಿಕರ ಓಡಾಟ ಕಡಿಮೆ ಇದೆ. ಹೀಗಾಗಿ ರಾಜ್ಯದಲ್ಲಿ ಲಾಕ್ ಡೌನ್ ಸಂಪೂರ್ಣವಾಗಿ ಯಶಸ್ವಿಯಾಗಿದ್ಯಾ ಅಂದ್ರೆ ಇಲ್ಲ. ಈಗ ಸೋಂಕು ಕಡಿಮೆಯಾಗ್ತಿದ್ದು, ನಾಳೆ ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಲಿದ್ದಾರೆ.

ಜೂನ್ 14ಕ್ಕೂ ಮೊದ್ಲೇ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ಶುರುವಾಗಲಿದೆ. ಮೊದಲಿಗೆ ಸೋಂಕು ಕಡಿಮೆ ಬಂದ ಜಿಲ್ಲೆಗಳಿಗೆ ಆದ್ಯತೆ ನೀಡಲಾಗುವುದು. ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಶುರುವಾಗಲಿದೆ. 2ನೇ ಹಂತದಲ್ಲಿ ಅಂಗಡಿ ಮುಂಗಟ್ಟುಗಳ ವ್ಯಾಪಾರ ವಹಿವಾಟಿಗೆ ಅವಕಾಶ, 3ನೇ ಹಂತದಲ್ಲಿ ಮಾರುಕಟ್ಟೆ, ಜಿಮ್, ಥಿಯೇಟರ್ ಸೇರಿದಂತೆ ಇತರೆ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!