ಲಖನೌ: ಉತ್ತರ ಪ್ರದೇಶದ ಔರೈಯಾ ಬಳಿ ಇಂದು ನಸುಕಿನ ಜಾವ 3.30ರ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ 23 ವಲಸೆ ಕಾರ್ಮಿಕರ ಘಟನೆ ಸಂಬಂಧ, ಮಾಜಿ ಸಿಎಂ ಮಾಯಾವತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇಷ್ಟೊಂದು ದೊಡ್ಡ ದುರಂತ ಸಂಭವಿಸಿದೆ. ಅವರ ಕೆಲಸವನ್ನ ಸರಿಯಾಗಿ ನಿರ್ವಹಣೆ ಮಾಡ್ತಿಲ್ಲ. ಅಂತವರ ವಿರುದ್ಧ ಸೂಕ್ತ ಕ್ರಮಗಳನ್ನ ತೆಗೆದುಕೊಳ್ಳಿಯೆಂದು ಸಿಎಂ ಯೋಗಿ ಆದಿತ್ಯನಾಥಗೆ ತಿಳಿಸಿದ್ದಾರೆ. ಇನ್ನು ಸಾವನ್ನಪ್ಪಿದವರ ಕುಟುಂಬಕ್ಕೆ, ಗಾಯಗೊಂಡವರಿಗೆ ಸೂಕ್ತ ಪರಿಹಾರ ನೀಡಿಯೆಂದು ಒತ್ತಾಯಿಸಿದ್ದಾರೆ.