ಪ್ರಜಾಸ್ತ್ರ ಸುದ್ದಿ
ಲಖ್ನೋ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಭರ್ಜರಿ ಪ್ರಚಾರ ನಡೆದಿದೆ. ಇಂದು ಕಾಂಗ್ರೆಸ್ ಭರ್ತಿ ವಿಧಾನ್(ನೇಮಕಾತಿ ವಿಧಾನ) ಹೆಸರಿನ ಮೂಲಕ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಇದು ಸುಳ್ಳಿನ ಮಿಷನ್ ಅಲ್ಲ. ಯುವಕರನ್ನು ಸಂಪರ್ಕಿಸಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ಯುವ ಶಕ್ತಿಯೊಂದಿಗೆ ಹೊಸ ಉತ್ತರ ಪ್ರದೇಶ ಕಟ್ಟುತ್ತೇವೆ ಎಂದಿದ್ದಾರೆ.