ಪ್ರಜಾಸ್ತ್ರ ಸುದ್ದಿ
ಗೋರಖ್ ಪುರ್: ಉತ್ತರ ಪ್ರದೇಶದಲ್ಲಿ ಇದೀಗ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದೆ. 7 ಹಂತಗಳಲ್ಲಿ ಇಲ್ಲಿ ಮತದಾನ ನಡೆಯುತ್ತಿದೆ. ಇಂದು ಸಿಎಂ ಯೋಗಿ ಆದಿತ್ಯನಾಥ್ ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದ್ದರು.
ಇಲ್ಲಿ ಭೀಮಾ ಆರ್ಮಿಯ ಚಂದ್ರಶೇಖರ್ ಆಜಾದ್ ಸ್ಪರ್ಧಿಸಿದ್ದಾರೆ. ಸಮಾಜವಾದಿ ಪಕ್ಷ ತನ್ನ ಅಭ್ಯರ್ಥಿಯನ್ನು ಇನ್ನು ಘೋಷಿಸಿಲ್ಲ. ಎಸ್ಪಿ ತನ್ನ ಅಭ್ಯರ್ಥಿಯನ್ನಾಗಿ ಯಾರನ್ನು ನೇಮಿಸಬಹುದು ಅನ್ನೋ ಕುತೂಹಲವಿದೆ.