ಹತ್ರಾಸ್ ಸಾಮೂಹಿಕ ಅತ್ಯಾಚಾರ ಕೇಸ್: ತ್ರಿಸದಸ್ಯರ ಸಮಿತಿ ರಚನೆ

332

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಉತ್ತರ ಪ್ರದೇಶದಲ್ಲಿ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನ ಸದಸ್ಯರ ಸಮಿತಿ ರಚನೆ ಮಾಡಲಾಗಿದೆ. ಈ ತಂಡವನ್ನ ಗೃಹ ಕಾರ್ಯದರ್ಶಿ ಭಗವಾನ ಸ್ವರೂಪ ನೋಡಿಕೊಳ್ಳಲಿದ್ದಾರೆ.

19 ವರ್ಷದ ದಲಿತ ಯುವತಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ, ಅತ್ಯಂತ ಭೀಕರವಾಗಿ ಹಲ್ಲೆಗೆ ಒಳಗಾಗಿದ್ಳು. ವಾರಗಟ್ಟಲೇ ಜೀವನ್ಮರಣ ಹೋರಾಟ ನಡೆಸಿದ ಆಕೆ, ದೆಹಲಿ ಆಸ್ಪತ್ರೆಯಲ್ಲಿ ಮಂಗಳವಾರ ಸಾವನಪ್ಪಿದ್ದು ಕುಟುಂಬಸ್ಥರ ಅನುಪಸ್ಥಿತಿಯಲ್ಲಿ ತಡರಾತ್ರಿ ಅಂತ್ಯಸಂಸ್ಕಾರ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಸಂತ್ರಸ್ತೆಯ ಕುಟುಂಬದ ಮೇಲೆ ಒತ್ತಡ ತರುವ ಕೆಲಸ ಮಾಡಲಾಗ್ತಿದೆ ಎಂದು ಹೇಳಿದ್ದು, ಭದ್ರತೆ ನೀಡಬೇಕು ಎಂದಿದ್ದಾರೆ. ಸ್ಥಳೀಯ ಪೊಲೀಸರನ್ನ ನಾವು ನಂಬುವುದಿಲ್ಲ. ನ್ಯಾಯಾಂಗ ತನಿಖೆ ನಡೆಯಲಿ ಸಹೋದರ ಒತ್ತಾಯಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!